ಬೇಕಾಗುವ ಸಾಮಗ್ರಿಗಳು:
ಕಡ್ಲೆಕಾಳು – ಒಂದು ಬಟ್ಟಲು,ಹೆಚ್ಚಿದ ಈರುಳ್ಳಿ ಸ್ವಲ್ಪ
ಹೆಚ್ಚಿದ ಹಸಿಮೆಣಸಿನಕಾಯಿ,ಎಣ್ಣೆ, ಸಾಸಿವೆ
ಕರಿಬೇವು
ಚಿಟಿಕೆ ಇಂಗು,ಹುಣಸೇಹುಳಿ ರಸ/ನಿಂಬೆರಸ-ಕಾಲು ಚಮಚ,ಉಪ್ಪು ರುಚಿಗೆ,ಕೊತ್ತುಂಬರಿಸೊಪ್ಪು
ಕಾಯಿತುರಿ

ಮಾಡುವ ವಿಧಾನ: ಹಿಂದಿನ ದಿನ ರಾತ್ರಿ ಕಡ್ಲೆಕಾಳನ್ನು ಚೆನ್ನಾಗಿ ತೊಳೆದು,ನೀರು ಹಾಕಿ ನೆನೆಸಿಡಿ. ಬೆಳಗ್ಗೆ ಮತ್ತೆ ನೀರಿನಲ್ಲಿ ಚೆನ್ನಾಗಿ ತೊಳೆಯಿರಿ. ಕುಕ್ಕರ್ ಗೆ ಕಾಳುಗಳನ್ನು ಹಾಕಿ ಒಂದು ಲೋಟ ನೀರು ಹಾಕಿ,,ಉಪ್ಪು ಮತ್ತು ಎಣ್ಣೆ ಸ್ವಲ್ಪ ಹಾಕಿ. ಬೇಯಿಸಿಕೊಳ್ಳಿ. ನೀರು ಜಾಸ್ತಿ ಹಾಕಿದ್ದರೆ ನೀರು ಬಸಿಯಿರಿ.
ಪಾತ್ರೆ/ಬಾಣಲೆಗೆ ಒಂದೆರಡು ಚಮಚ ಎಣ್ಣೆ ಹಾಕಿ,ಸಾಸಿವೆ,ಕರಿಬೇವು,ಚಿಟಿಕೆ ಇಂಗು,ಹಸಿಮೆಣಸಿನಕಾಯಿ,ಈರುಳ್ಳಿಯನ್ನು ಹಾಕಿ,ಕೆಲವು ನಿಮಿಷ ಹುರಿಯಿರಿ,ಈರುಳ್ಳಿಯೂ ಸ್ವಲ್ಪ ಬಣ್ಣ ನಂತರ ಚಿಟಿಕೆ ಉಪ್ಪು ಹಾಕಿ ,ಬೇಯಿಸಿರುವ ಕಡ್ಲೆಕಾಳನ್ನು ಹಾಕಿ,ಎಲ್ಲವನ್ನು ಚೆನ್ನಾಗಿ ಬೆರೆಸಿ. ಕಾಯಿತುರಿ ಮತ್ತು ಕೊತ್ತುಂಬರಿ ಸೊಪ್ಪನ್ನು ಹಾಕಿ ಸರಿಯಾಗಿ ಬೆರೆಸಿ. ಇದನ್ನು ಊಟಕ್ಕೆ ನೆಂಚಿಕೊಳ್ಳಬಹುದು.ಇದನ್ನು ಸಂಜೆ ಕಾಫಿಯೊಂದಿಗೆ ಸ್ನಾಕ್ ತರಹ ಸರ್ವ್ ಮಾಡಿ. ಈ ಕಡ್ಲೆಕಾಳು ಉಸಲಿಯನ್ನು ಸರ್ವ್ ಮಾಡುವಾಗ ಸ್ವಲ್ಪ ಕತ್ತರಿಸಿದ ಹಸಿ ಈರುಳ್ಳಿಯನ್ನು ಮೇಲೆ ಹಾಕಿ ಕೊಡಿ.
*ನಿಂಬೆರಸ ಹಾಕುವುದಾದರೆ ಕೊನೆಯಲ್ಲಿ ಬೆರೆಸಿ / ಹುಣಸೇರಸ ಹಾಕುವುದಾದರೆ ಒಗ್ಗರಣೆಯಲ್ಲಿ ಹಾಕಿ.
ತೇಜಸ್ವಿನಿ ಆರ್